ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದು ಹಾಗೂ ಸಭೆ-ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
ಇನ್ನೊಂದೆಡೆ, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಒಂದು ವೇಳೆ ಬಂಧನ ವಿಳಂಬವಾದರೆ ಬಾಗಲಕೋಟೆ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ನವನಗರದ ಈದ್ಗಾ ಮೈದಾನದ ಬಳಿಯ ಮಸೀದಿಯ ಮೂರು ಗುಮ್ಮಟಗಳನ್ನು ಕಿಡಿಗೇಡಿಗಳು ಕೆಡವಿ, ಗೋಡೆಯ ಮೇಲೆ ಓಂ ಎಂದು ಬರೆದಿರುವ ಘಟನೆಯೂ ವರದಿಯಾಗಿದೆ. ಈ ಘಟನೆಯಿಂದಾಗಿ ನಗರದಲ್ಲಿ ಮತ್ತಷ್ಟು ಆಕ್ರೋಶ ವ್ಯಕ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತವು ಮುಂದಿನ ಮೂರು ದಿನಗಳ ಕಾಲ ನಿಷೇಧಾಜ್ಞೆಯನ್ನು ವಿಸ್ತರಿಸಿದೆ.

